ರಾಜ್ಯ

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‌ ಗ್ಯಾರಂಟಿ ಯೋಜನೆಯಿಂದ ಜನರ ಜೀವನ ಉದ್ಧಾರ ಆಗಿದೆ. ಆದರೆ, ಬರೀ ರಸ್ತೆ, ಚರಂಡಿಗಳನ್ನೇ ಮಾಡ್ತಾ ಇದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಕೇಳಿದ್ದಾರೆ. ಯಾರು ಗ್ಯಾರಂಟಿ ಕಾರ್ಯಕ್ರಮವನ್ನು ಟೀಕೆ ಮಾಡುತ್ತಾರೆ. ಈ ಕಾರ್ಯಕ್ರಮ ಯಾರು ಒಪ್ಪೋದಿಲ್ಲವೋ ಅವರಿಗೆ ಒಂದು ಪ್ರಶ್ನೆ. ಈ ಜನ ಏನಾಗಬೇಕು? ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ. ನಾಳೆಯಿಂದ ನಿಲ್ಸಿ ಬಿಡೋಣ. ಈ 58 ಸಾವಿರ ಕೋಟಿ ರೂ. ಏನು ನಾವು ಕೊಡ್ತಾ ಇದ್ದೀವಿ, ನಾಳೆ ನಿಲ್ಲಿಸ್ತೀವಿ. ಆದರೆ, ನೀವು ರಸ್ತೆ ಮಾಡೋದ್ರಿಂದ, ಚರಂಡಿ ಮಾಡೋದ್ರಿಂದ ಅಥವಾ ಇನ್ನೇನೊ ಕಾರ್ಯಕ್ರಮ ಮಾಡೋದ್ರಿಂದ ಆ ಬಡವರ ಜೀವನ ಏನಾಗುತ್ತದೆ? ಉದ್ಧಾರ ಆಗುತ್ತದಾ ಎಂದು ಪ್ರಶ್ನೆ ಮಾಡಿದ್ದಾರೆ. ಭೌತಿಕ ಸೌಲಭ್ಯಕ್ಕಿಂತ ಜನರ ಜೀವನಕ್ಕೆ ಬೇಕಾದ ಕಾರ್ಯಕ್ರಮ ಕೊಡಬೇಕು ಎಂದು ಪ್ರಸ್ತಾಪಿಸಿದರು.

ಇದನ್ನೂ ಓದಿ:-ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹಾಗಂತ ನಾವು ರಸ್ತೆ ಮಾಡೋದನ್ನು ನಿಲ್ಲಿಸಿಲ್ಲ. ಮನೆಗಳನ್ನು ಕಟ್ಟೋದನ್ನು ನಿಲ್ಲಿಸಿಲ್ಲ. ಯಾವ ಕಾರ್ಯಕ್ರಮವನ್ನೂ ನಿಲ್ಲಿಸಿಲ್ಲ. ಕೆಲಸ ಮಾಡಲು ಒಂದಿಷ್ಟು ನಿಧಾನ ಆಗಿರಬಹುದು ಎಂದು ಒಪ್ಪಿಕೊಂಡರು. ಆದರೆ, ಬಹಳ ಮುಖ್ಯವಾಗಿ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ, ಅದು ಮುಂದುವರಿಯಬಾರದು ಅನ್ನೋದೆ ನಮ್ಮೆಲ್ಲರ ಉದ್ದೇಶ. ಅದಕ್ಕಾಗಿ ಗ್ಯಾರಂಟಿ ಕೊಡುತ್ತೇವೆ ಎಂದು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

1 hour ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

2 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

11 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

11 hours ago