ರಾಜ್ಯ

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‌ ಗ್ಯಾರಂಟಿ ಯೋಜನೆಯಿಂದ ಜನರ ಜೀವನ ಉದ್ಧಾರ ಆಗಿದೆ. ಆದರೆ, ಬರೀ ರಸ್ತೆ, ಚರಂಡಿಗಳನ್ನೇ ಮಾಡ್ತಾ ಇದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಕೇಳಿದ್ದಾರೆ. ಯಾರು ಗ್ಯಾರಂಟಿ ಕಾರ್ಯಕ್ರಮವನ್ನು ಟೀಕೆ ಮಾಡುತ್ತಾರೆ. ಈ ಕಾರ್ಯಕ್ರಮ ಯಾರು ಒಪ್ಪೋದಿಲ್ಲವೋ ಅವರಿಗೆ ಒಂದು ಪ್ರಶ್ನೆ. ಈ ಜನ ಏನಾಗಬೇಕು? ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ. ನಾಳೆಯಿಂದ ನಿಲ್ಸಿ ಬಿಡೋಣ. ಈ 58 ಸಾವಿರ ಕೋಟಿ ರೂ. ಏನು ನಾವು ಕೊಡ್ತಾ ಇದ್ದೀವಿ, ನಾಳೆ ನಿಲ್ಲಿಸ್ತೀವಿ. ಆದರೆ, ನೀವು ರಸ್ತೆ ಮಾಡೋದ್ರಿಂದ, ಚರಂಡಿ ಮಾಡೋದ್ರಿಂದ ಅಥವಾ ಇನ್ನೇನೊ ಕಾರ್ಯಕ್ರಮ ಮಾಡೋದ್ರಿಂದ ಆ ಬಡವರ ಜೀವನ ಏನಾಗುತ್ತದೆ? ಉದ್ಧಾರ ಆಗುತ್ತದಾ ಎಂದು ಪ್ರಶ್ನೆ ಮಾಡಿದ್ದಾರೆ. ಭೌತಿಕ ಸೌಲಭ್ಯಕ್ಕಿಂತ ಜನರ ಜೀವನಕ್ಕೆ ಬೇಕಾದ ಕಾರ್ಯಕ್ರಮ ಕೊಡಬೇಕು ಎಂದು ಪ್ರಸ್ತಾಪಿಸಿದರು.

ಇದನ್ನೂ ಓದಿ:-ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹಾಗಂತ ನಾವು ರಸ್ತೆ ಮಾಡೋದನ್ನು ನಿಲ್ಲಿಸಿಲ್ಲ. ಮನೆಗಳನ್ನು ಕಟ್ಟೋದನ್ನು ನಿಲ್ಲಿಸಿಲ್ಲ. ಯಾವ ಕಾರ್ಯಕ್ರಮವನ್ನೂ ನಿಲ್ಲಿಸಿಲ್ಲ. ಕೆಲಸ ಮಾಡಲು ಒಂದಿಷ್ಟು ನಿಧಾನ ಆಗಿರಬಹುದು ಎಂದು ಒಪ್ಪಿಕೊಂಡರು. ಆದರೆ, ಬಹಳ ಮುಖ್ಯವಾಗಿ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ, ಅದು ಮುಂದುವರಿಯಬಾರದು ಅನ್ನೋದೆ ನಮ್ಮೆಲ್ಲರ ಉದ್ದೇಶ. ಅದಕ್ಕಾಗಿ ಗ್ಯಾರಂಟಿ ಕೊಡುತ್ತೇವೆ ಎಂದು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago