ರಾಜ್ಯ

ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ತೈಲ ಬೆಲೆ ಕಡಿಮೆ: ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಹೆಚ್ಚಳವಾಗಿದ್ದು, ಸಾರ್ವಜನಿಕ ಹಾಗೂ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆ ರಾಜ್ಯಗಳಿಗಿಂತ ಕಡಿಮೆಯಿದೆ ಇನ್ನುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥಸಿಕೊಂಡಿದ್ದಾರೆ.

ವ್ಯಾಟ್‌ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್‌, ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲೇ ಕಡಿಮೆ ಇರೋದು. ಹಾಗೆಯೇ ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶಕ್ಕಿಂತಲೂ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಗಿನ ಡಬಲ್‌ ಇಂಜಿನ್‌ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲವನ್ನು ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ವ್ಯಾಟ್‌ ಕಡಿಮೆ ಮಾಡಿದ್ದರು. ಕೇಂದ್ರ ಬಿಜೆಪಿ ಪದೇ ಪದೇ ವ್ಯಾಟ್‌ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದರು.

ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ತೈಲ ದರ ತಲಾ 9.48 ರೂ 3.56 ರೂ ತೆರಿಗೆ ಇತ್ತು. ಬಿಜೆಪಿಯ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ತೆರಿಗೆ ಹೆಚ್ಚಳವಾಗಿದೆ. ಪೆಟ್ರೋಲ್ಗೆ 32.98 ರೂ. ಹಾಗೂ ಡೀಸೆಲ್‌ 31.83 ರೂ ಹೆಚ್ಳ ಮಾಡಲಾಗಿದೆ. ಸದ್ಯ ಪೆಟ್ರೋಲ್‌ ಮೇಲಿನ ತೆರಿಗೆ 19.9 ರೂಪಾಯಿ ಹಾಗೂ ಡೀಸೆಲ್‌ ಮೇಲೆ 18.8 ರೂಪಾಯಿ ತೆರಿಗೆ ಇದೆ. ಕೇಂದ್ರ ಸರ್ಕಾರ ಜನರ ಒಳಿತಿಗೆ ತೆರಿಗೆ ಕಡಿಮೆ ಮಾಡಬೇಕು. ವ್ಯಾಟ್‌ ಹೆಚ್ಚಳದಿಂದ ಬಂದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡಲಾಗುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

25 mins ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

13 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

14 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

15 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

15 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

19 hours ago