ರಾಜ್ಯ

ಡಿಸೆಂಬರ್.‌27ರಂದು ʼಜೈಭೀಮ್‌, ಜೈ ಭಾಪು, ಜೈ ಸಂವಿಧಾನʼ ಸಮಾವೇಶ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್‌, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಈ ಪ್ರದೇಶವನ್ನು ʼಮಹಾತ್ಮ ಗಾಂಧೀಜಿ ನವನಗರʼ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್‌.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಭಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ ಎಂದರು.

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಷಯ ಎಂದು ಹೇಳಿದರು.

ಬೆಳಗಾವಿಯಲ್ಲಿ ಅಂದು ನಡೆದ ಅಧಿವೇಶನದಲ್ಲಿ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಅಂದಿನ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಂದು 80ಕ್ಕೂ ಹೆಚ್ಚು ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ.

ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಭೆಯಲ್ಲಿ ಸರ್ಚಿಸುತ್ತೇವೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

9 mins ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

17 mins ago

ಓದುಗರ ಪತ್ರ: ಯುದ್ಧ-ಬುದ್ಧ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…

34 mins ago

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…

39 mins ago

ಓದುಗರ ಪತ್ರ: ಲಿಂಗಾಂಬುಧಿ ಕೆರೆ ಏರಿ ಬೀದಿ ದೀಪ ಸರಿಪಡಿಸಿ

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…

41 mins ago

ಓದುಗರ ಪತ್ರ: ಕಿಸಾನ್ ಸಮಾನ್ ಸರ್ವರ್ ಸಮಸ್ಯೆ ನಿವಾರಿಸಿ

ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…

44 mins ago