ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಮಾಡಿರುವ ಪ್ಲ್ಯಾನ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಸೂದೆ ಮಂಡನೆ ವಿಚಾರಕ್ಕೆ ಕಿಡಿಕಾರಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಮಸೂದೆಯು ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿದೆ. ಈ ಮಸೂದೆ ರಾಜ್ಯದ ಹಕ್ಕುಗಳನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ವಿರುದ್ದವಾಗಿದೆ. ದೇಶಾದ್ಯಂತ ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧಿಸಿದ್ದಾರೆ. ಇತ್ತೀಚಿಗೆ ಪ್ರಾದೇಶಿಕ ಪಕ್ಷಗಳು ತಮ್ಮ ನೆಲದಲ್ಲಿ ಹಿಡಿತ ಸಾಧಿಸುತ್ತಿವೆ. ಇದನ್ನು ಸಹಿಸದ ಕೇಂದ್ರ ಸರ್ಕಾರ ಇಂತಹ ಮಸೂದೆಗಳನ್ನು ಜಾರಿ ಮಾಡುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಲಮಟ್ಟಿ ಸಂತ್ರಸ್ತರ ವಿಚಾರವಾಗಿ ಮಾತನಾಡಿದ ಅವರು, ಭೂ ಸ್ವಾಧೀನ ನೋಟಿಫಿಕೇಶನ್ ಆಗಬೇಕಿದೆ. ನೋಟಿಫಿಕೇಶನ್ ಮುಂಚೆಯೇ ಕೆಲಸ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಇಷ್ಟು ಬೆಲೆ ಇಲ್ಲ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನೀಡಿದ ರೇಟ್ ನೀಡಲು ನಾವು ಸಿದ್ದರಾಗಿದ್ದೇವೆ. ಸಿಎಂ ಇದೇ ವಿಚಾರವಾಗಿ ಸೋಮವಾರ ಸಭೆ ನಡೆಸಲಿದ್ದಾರೆ. ಸಂತ್ರಸ್ತರ ಬೇಡಿಕೆಗಳಿಗನುಗುಣವಾಗಿ ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬಹುದೋ ಅದನ್ನು ಮಾಡುತ್ತೇವೆ. ಅದಕ್ಕೂ ಮೊದಲು ಕೇಂದ್ರ ಗೆಜೆಟ್ ನೋಟಿಫಿಕೇಷನ್ ಮಾಡಬೇಕಿದೆ. ಕೇಂದ್ರ 16 ಸಾವಿರ ಕೋಟಿ ಮಾತ್ರ ಕೊಟ್ಟಿದೆ ಎಂದು ಹೇಳಿದರು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…