ರಾಜ್ಯ

ಒಂದು ದೇಶ ಒಂದು ಚುನಾವಣೆ | ಪ್ರಾದೇಶಿಕ ಪಕ್ಷ ಮುಗಿಸಲು ಬಿಜೆಪಿ ಮಾಡಿರುವ ಪ್ಯ್ಲಾನ್‌; ಡಿಕೆಶಿ

ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಮಾಡಿರುವ ಪ್ಲ್ಯಾನ್‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಮಸೂದೆ ಮಂಡನೆ ವಿಚಾರಕ್ಕೆ ಕಿಡಿಕಾರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಮಸೂದೆಯು ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿದೆ. ಈ ಮಸೂದೆ ರಾಜ್ಯದ ಹಕ್ಕುಗಳನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಹೇಳಿದ್ದಾರೆ.

ಇದು ಕಾಂಗ್ರೆಸ್‌ ಪಕ್ಷದ ಸಿದ್ದಾಂತಕ್ಕೆ ವಿರುದ್ದವಾಗಿದೆ. ದೇಶಾದ್ಯಂತ ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧಿಸಿದ್ದಾರೆ. ಇತ್ತೀಚಿಗೆ ಪ್ರಾದೇಶಿಕ ಪಕ್ಷಗಳು ತಮ್ಮ ನೆಲದಲ್ಲಿ ಹಿಡಿತ ಸಾಧಿಸುತ್ತಿವೆ. ಇದನ್ನು ಸಹಿಸದ ಕೇಂದ್ರ ಸರ್ಕಾರ ಇಂತಹ ಮಸೂದೆಗಳನ್ನು ಜಾರಿ ಮಾಡುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು  ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ ಸಂತ್ರಸ್ತರ ವಿಚಾರವಾಗಿ ಮಾತನಾಡಿದ ಅವರು, ಭೂ ಸ್ವಾಧೀನ ನೋಟಿಫಿಕೇಶನ್‌ ಆಗಬೇಕಿದೆ. ನೋಟಿಫಿಕೇಶನ್‌ ಮುಂಚೆಯೇ ಕೆಲಸ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಇಷ್ಟು ಬೆಲೆ ಇಲ್ಲ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನೀಡಿದ ರೇಟ್‌ ನೀಡಲು ನಾವು ಸಿದ್ದರಾಗಿದ್ದೇವೆ. ಸಿಎಂ ಇದೇ ವಿಚಾರವಾಗಿ ಸೋಮವಾರ ಸಭೆ ನಡೆಸಲಿದ್ದಾರೆ. ಸಂತ್ರಸ್ತರ ಬೇಡಿಕೆಗಳಿಗನುಗುಣವಾಗಿ ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬಹುದೋ ಅದನ್ನು ಮಾಡುತ್ತೇವೆ. ಅದಕ್ಕೂ ಮೊದಲು ಕೇಂದ್ರ ಗೆಜೆಟ್‌ ನೋಟಿಫಿಕೇಷನ್‌ ಮಾಡಬೇಕಿದೆ. ಕೇಂದ್ರ 16 ಸಾವಿರ ಕೋಟಿ ಮಾತ್ರ ಕೊಟ್ಟಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

27 seconds ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago