ರಾಜ್ಯ

ಒಂದು ವಾಹನ ಒಂದು ಫಾಸ್ಟ್‌ ಟ್ಯಾಗ್‌ ನಿಯಮ ದೇಶಾದ್ಯಂತ ಜಾರಿ !

ನವದೆಹಲಿ:  ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹಲವು ವಾಹನಗಳಿಗೆ ಒಂದೇ ಫಾಸ್ಟ್ ಬಳಕೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್ ಗಳನ್ನು ಲಿಂಕ್ ಮಾಡುವುದನ್ನು ಈ ನಿಯಮ ನಿರ್ಬಂಧಿಸುತ್ತದೆ.

ಮಾರ್ಚ್ 1 ರಿಂದಲೇ ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಜಾರಿಗೆ ಬರಬೇಕಿತ್ತು. ನಿರ್ಬಂಧಿತ ಪೇಟಿಎಂ ಪೇಮೆಂಟ್ ಬ್ಯಾಂಕ್ ನ ಫಾಸ್ಟ್ಯಾಗ್ ಬಳಕೆದಾರರು ತೊಂದರೆಗೀಡಾದ ಕಾರಣ ಒಂದು ತಿಂಗಳವರೆಗೆ ಗಡುವು ವಿಸ್ತರಿಸಲಾಗಿತ್ತು. ಹೀಗಾಗಿ ಏಪ್ರಿಲ್ 1ರಿಂದ ಜಾರಿಗೆ ಬಂದಿದೆ.

ಇನ್ನು ಬಹು ಫಾಸ್ಟ್ಯಾಗ್ ಗಳು ಕಾರ್ಯ ನಿರ್ವಹಿಸುವುದಿಲ್ಲ. ಒಂದು ವಾಹನಕ್ಕೆ ಬಹು ಫಾಸ್ಟ್ಯಾಗ್ ಗಳನ್ನು ಹೊಂದಿರುವರವರಿಗೆ ಏಪ್ರಿಲ್ 1ರಿಂದ ಆ ಫಾಸ್ಟ್ಯಾಗ್ ಬಳಸಲು ಸಾಧ್ಯವಾಗುವುದಿಲ್ಲ. ಕೆಲವರು ಒಂದೇ ವಾಹನಕ್ಕೆ ಹಲವು ಫಾಸ್ಟ್ಯಾಗ್ ಲಿಂಕ್ ಮಾಡುತ್ತಿದ್ದರು ಅಥವಾ ಅನೇಕ ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಬಳಕೆ ಮಾಡುತ್ತಿದ್ದರು.

ಇದನ್ನು ತಡೆಗಟ್ಟಿ ಟೋಲ್ ಗಳಲ್ಲಿ ತಡೆರಹಿತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಜಾರಿಗೆ ತಂದಿತ್ತು.

ಕೆವೈಸಿ ಅಪೂರ್ಣವಾಗಿರುವ ಗ್ರಾಹಕರು ತಾವು ಫಾಸ್ಟ್ಯಾಗ್ ಪಡೆದ ಬ್ಯಾಂಕ್ ಗಳಿಗೆ ಹೋಗಿ ಕೆವೈಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ. ಟೋಲ್ ಗಳಲ್ಲಿ ಅಡೆತಡೆ ಇಲ್ಲದೆ ಪ್ರಯಾಣಿಸಬಹುದಾಗಿದ್ದು, ಸೋರಿಕೆ ತಡೆಯಾಗಿ ಆದಾಯ ಎಚ್ಚರವಾಗುವ ನಿರೀಕ್ಷೆ ಇದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago