ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್.21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಳೆಯಿಂದ ಹಾನಿಗೊಳಗಾಗಿದ್ದ ಮಹದೇವಪುರ ಮತ್ತು ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಿಸು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.




