ರಾಜ್ಯ

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್‌ ಅವರು, ತಾಪಮಾನದ ವೈಪರೀತ್ಯದಿಂದಾಗಿ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಟಿದೆ. ತಾಪಮಾನದಿಂದ ರಾತ್ರಿ ಹಾಗೂ ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತದೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ. ಡ್ಯಾಂಗಳ ನೀರು ಆವಿಯಾಗುತ್ತಿದ್ದು, ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆಯಿದೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಮನುಷ್ಯರಿಗೂ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

20 mins ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

21 mins ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

2 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

3 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

3 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

3 hours ago