ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈಗ ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಜಾರಿಗೊಳಿಸಲು ಹೊರಟಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಟ್ರೆಕ್ಕಿಂಗ್ ಪ್ರಕ್ರಿಯೆಯನ್ನ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಮಂಗಳೂರು ವ್ಯಾಪ್ತಿಯ ಕುದುರೆಮುಖ, ನೇತ್ರಾವತಿ ಮತ್ತು ಇತರ ಕೆಲವು ಟ್ರೆಕ್ಕಿಂಗ್ ತಾಣಗಳಿಗೆ ಇಲಾಖೆಯು ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಪರಿಚಯಿಸಿದೆ. ಜುಲೈ ತಿಂಗಳಲ್ಲಿ ಇದ್ದನ್ನ ವಿಸ್ತರಿಸುತ್ತೇವೆ. ಈಗಾಗಲೇ ಒಂದೇ ವೆಬ್ ಸೈಟ್ ನಲ್ಲಿ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೆ ಆನ್ ಲೈನ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇನ್ನ ೧೫ ದಿನಗಳಲ್ಲಿ ಸಿದ್ದವಾಗಲಿದೆ ಎಂದು ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…