ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈಗ ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಜಾರಿಗೊಳಿಸಲು ಹೊರಟಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಟ್ರೆಕ್ಕಿಂಗ್ ಪ್ರಕ್ರಿಯೆಯನ್ನ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಮಂಗಳೂರು ವ್ಯಾಪ್ತಿಯ ಕುದುರೆಮುಖ, ನೇತ್ರಾವತಿ ಮತ್ತು ಇತರ ಕೆಲವು ಟ್ರೆಕ್ಕಿಂಗ್ ತಾಣಗಳಿಗೆ ಇಲಾಖೆಯು ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಪರಿಚಯಿಸಿದೆ. ಜುಲೈ ತಿಂಗಳಲ್ಲಿ ಇದ್ದನ್ನ ವಿಸ್ತರಿಸುತ್ತೇವೆ. ಈಗಾಗಲೇ ಒಂದೇ ವೆಬ್ ಸೈಟ್ ನಲ್ಲಿ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೆ ಆನ್ ಲೈನ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇನ್ನ ೧೫ ದಿನಗಳಲ್ಲಿ ಸಿದ್ದವಾಗಲಿದೆ ಎಂದು ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…