ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಬರಿಮಲೆಯಲ್ಲಿ ನವೆಂಬರ್ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಅರಣ್ಯ ಮಾರ್ಗದಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದು, ಜನಸಂದಣಿಯ ಸಮಯದಲ್ಲಿ ವಾಹಗಳನ್ನು ನಿಯಂತ್ರಿಸಲು ಹಲವು ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಚರ್ಚೆ ನಡೆಸಲಾಗಿದೆ.
ಇನ್ನು ಪಾರ್ಕಿಂಗ್ಗೆ ಅಗತ್ಯ ಪ್ರದೇಶಗಳನ್ನು ಗುರುತಿಸಿ ಆ ಸ್ಥಳಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.