ರಾಜ್ಯ

ಬೆಂಗಳೂರಿನಲ್ಲಿ ಆನ್‌ಲೈನ್‌ ಗೇಮಿಂಗ್‌ ಕಂಪನಿ ಧ್ವಂಸ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್‌ ಗೇಮಿಂಗ್‌ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಕೋರಮಂಗಲದಲ್ಲಿರುವ ಗೋಲ್ಟನ್‌ ಏಸಸ್‌ ಎಂಬ ಆನ್‌ಲೈನ್‌ ಗೇಮಿಂಗ್‌ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು ಹಾಕಿ ಧ್ವಂಸ ಮಾಡಿದ್ದಾರೆ.

ಇದನ್ನೂ ಓದಿ:-ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ

ಗ್ರಾಹಕರು ಆನ್‌ಲೈನ್‌ ಬೆಟ್ಟಿಂಗ್‌ ಆಡುತ್ತಿದ್ದಾಗಲೇ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು, ಆನ್‌ಲೈನ್‌ ಗೇಮಿಂಗ್‌ ಕಂಪನಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೈಕೋರ್ಟ್‌, ಸುಪ್ರೀಂಕೋರ್ಟ್‌ ಆನ್‌ಲೈನ್‌ ಗೇಮಿಂಗ್‌ನ್ನು ನಿಷೇಧಿಸಿವೆ. ಆದರೂ ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ದಂಧೆ ನಡೆಸಲಾಗುತ್ತಿದೆ. ಆನ್‌ಲೈನ್‌ ಗೇಮಿಂಗ್‌ನಿಂದ ಯುವಕರು ಬಲಿಯಾಗುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

9 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

10 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

12 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

12 hours ago