ರಾಜ್ಯ

ಮುಳ್ಳಯ್ಯನಗಿರಿಗೆ ತೆರಳಲು ಇನ್ಮುಂದೆ ಆನ್‌ಲೈನ್‌ ನೋಂದಣಿ ಕಡ್ಡಾಯ; ದಿನಕ್ಕೆ 600 ವಾಹನಗಳಿಗೆ ಅವಕಾಶ

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ.

ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬರುವ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ, ಬಾಬಾ ಬುಡನ್‌ ಗಿರಿ, ದರ್ಗಾ ಸೇರಿದಂತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಗಿರಿಭಾಗಕ್ಕೆ ಬರುತ್ತಾರೆ. ಇದರಿಂದ ಗಿರಿಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಬಗ್ಗೆ ಪರಿಸರ ಪ್ರೇಮಿಗಳು ಅಸಮಾಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆನ್‌ಲೈನ್‌ ಮೂಲಕ ನೋಂದಣಿ ಮಾಡಿ ದಿನಕ್ಕೆ ನಿರ್ದಿಷ್ಟ ವಾಹನಗಳನ್ನು ಮಾತ್ರ ಬಿಡಲು ಚಿಂತನೆ ನಡೆಸಿದೆ.

ಇನ್ನೂ ಅಲ್ಲಿ ವಾಹನ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ದಿನಕ್ಕೆ ಎರಡು ಸಮಯದಲ್ಲಿ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸಲಿದೆ. ಬೆಳಿಗ್ಗೆ 9 ಗಂಟೆಗೆ 300 ವಾಹನ, ಮಧ್ಯಾಹ್ನ 2 ಗಂಟೆಗೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.

ಇನ್ನೂ ಮಳೆಗಾಲದ ಆರಂಭದಲ್ಲೇ ಚಾರಣಕ್ಕೆ ನಿಷೇಧ ಹಾಕಿರುವುದು ಟ್ರಕ್ಕಿಂಗ್‌ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಇಲ್ಲಿಗೆ ಸಾವಿರಾರು ಪ್ರವಾಸಿಗರು ಅರಣ್ಯ ಇಲಾಖೆ ನಿಯಮಗಳನ್ನು ಪಾಲಿಸಿಕೊಂಡು ಚಾರಣ ಮಾಡುತ್ತಿದ್ದರು. ಈಗ ಚಾರಣಕ್ಕೆ ನಿಷೇಧ ಹೇರಲಾಗಿದ್ದು, ನಿಬಂಧನೆಗಳೊಂದಿಗೆ ಚಾರಣಕ್ಕೆ ಅವಕಾಶ ನೀಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago