ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್ಲೈನ್ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ.
ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬರುವ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ, ಬಾಬಾ ಬುಡನ್ ಗಿರಿ, ದರ್ಗಾ ಸೇರಿದಂತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಗಿರಿಭಾಗಕ್ಕೆ ಬರುತ್ತಾರೆ. ಇದರಿಂದ ಗಿರಿಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಬಗ್ಗೆ ಪರಿಸರ ಪ್ರೇಮಿಗಳು ಅಸಮಾಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆನ್ಲೈನ್ ಮೂಲಕ ನೋಂದಣಿ ಮಾಡಿ ದಿನಕ್ಕೆ ನಿರ್ದಿಷ್ಟ ವಾಹನಗಳನ್ನು ಮಾತ್ರ ಬಿಡಲು ಚಿಂತನೆ ನಡೆಸಿದೆ.
ಇನ್ನೂ ಅಲ್ಲಿ ವಾಹನ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ದಿನಕ್ಕೆ ಎರಡು ಸಮಯದಲ್ಲಿ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸಲಿದೆ. ಬೆಳಿಗ್ಗೆ 9 ಗಂಟೆಗೆ 300 ವಾಹನ, ಮಧ್ಯಾಹ್ನ 2 ಗಂಟೆಗೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.
ಇನ್ನೂ ಮಳೆಗಾಲದ ಆರಂಭದಲ್ಲೇ ಚಾರಣಕ್ಕೆ ನಿಷೇಧ ಹಾಕಿರುವುದು ಟ್ರಕ್ಕಿಂಗ್ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಇಲ್ಲಿಗೆ ಸಾವಿರಾರು ಪ್ರವಾಸಿಗರು ಅರಣ್ಯ ಇಲಾಖೆ ನಿಯಮಗಳನ್ನು ಪಾಲಿಸಿಕೊಂಡು ಚಾರಣ ಮಾಡುತ್ತಿದ್ದರು. ಈಗ ಚಾರಣಕ್ಕೆ ನಿಷೇಧ ಹೇರಲಾಗಿದ್ದು, ನಿಬಂಧನೆಗಳೊಂದಿಗೆ ಚಾರಣಕ್ಕೆ ಅವಕಾಶ ನೀಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…