ರಾಜ್ಯ

ಮೈಕ್ರೋಫೈನಾನ್ಸ್‌ ಹಾವಳಿ ತಪ್ಪಿಸಲು ಆನ್‌ಲೈನ್‌ ವ್ಯವಸ್ಥೆ

ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್‌ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್‌ಲೈನ್‌ ಪೋರ್ಟಲ್‌ ಮೂಲಕವೇ ನಿಭಾಯಿಸಬೇಕು. ಯಾರಿಗೆ ಎಷ್ಟು ಸಾಲ ನೀಡಿದೆ ಎಂಬುದನ್ನು ಪೋರ್ಟಲ್‌ನಲ್ಲಿ ಉಲ್ಲೇಖಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ ರಿಸರ್ವ್‌ ಬ್ಯಾಂಕ್‌ ನೀತಿಗೆ ಅನುಗುನವಾಗಿರಬೇಕು ಎಂಬ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.

ಮೈಕ್ರೋ ಫೈನಾನ್ಸ್‌ ಕಂಪನಿಗಳು ರಾಜ್ಯದಲ್ಲಿ ನೋಂದಣಿ ಆಗೀರಬೇಕು. ಈ ಕಂಪನಿಗಳ ವ್ಯವಹಾರಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳನ್ನು ಒಳಗೊಂಡ ಒಂಬುಡ್ಸುಮನ್‌ ನೇಮಕ ಮಾಡಬೇಕು. ಹಾಗೆಯೇ ಈ ಕಂಪನಿಗಳು ಸಾಲದ ಹೆಸರಿನಲ್ಲಿ ಬಡ ಜನರಿಂದ ಯಾವುದೇ ವಸ್ತು ಅಥವಾ ಆಸ್ತಿಗಳನ್ನು ಅಡಮಾನ ಇಟ್ಟುಕೊಳ್ಳಬಾರದು ಎಂದು ಷರತ್ತು ವಿಧಿಸಲು ತೀರ್ಮಾನಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago