ಯುಪಿಐ ಬಂದಾಗಿನಿಂದ ಹಲವಾರು ಮಂದಿ ತಾವು ಪ್ರತಿನಿತ್ಯ ಪ್ರಯಾಣಿಸುವ ಬಸ್ಗಳಲ್ಲಿಯೂ ಟಿಕೆಟ್ ಪಡೆದುಕೊಳ್ಳಲು ಯುಪಿಐ ಪಾವತಿಯನ್ನು ಸ್ವೀಕರಿಸಿದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಎಸ್ಆರ್ಟಿಸಿಯಲ್ಲಿ ಪ್ರಯಾಣಿಸುವರೂ ಸಹ ಚಿಲ್ಲರೆ ಕಿರಿಕಿರಿಯಾದಾಗಲೆಲ್ಲಾ ಆನ್ಲೈನ್ ಪೇಮೆಂಟ್ ಇದ್ದಿದ್ದರೆ ಎಷ್ಟು ಚೆಂದ ಎಂದುಕೊಂಡಿದ್ದುಂಟು.
ಇದೀಗ ಇಂತಹ ಹಲವರ ಅಭಿಪ್ರಾಯ ಹಾಗೂ ಕನಸು ನನಸಾಗುವ ಸಮಯ ಹತ್ತಿರ ಬಂದಿದೆ. ರಾಜ್ಯ ಸಚಿವ ರಾಮಲಿಂಗರೆಡ್ಡಿ ಈ ಕುರಿತು ಮಾಧ್ಯಮದವರ ಜತೆ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲಿಯೇ ಕ್ಯಾಶ್ಲೆಸ್ ಪ್ರಯಾಣ ಮಾಡಬಹುದು, ಅದರ ಕುರಿತ ಕೆಲಸಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಮೂರು ತಿಂಗಳಲ್ಲಿ ಕ್ಯಾಶ್ಲೆಸ್ ಶುರುವಾಗಲಿದೆ. ತಾಂತ್ರಿಕ ಕೆಲಸಗಳು ಜರುಗುತ್ತಿದ್ದು, ಜನರಿಗೆ ಇರುವ ಚಿಲ್ಲರೆ ಸಮಸ್ಯೆಗಳು ಕಡಿಮೆಯಾಗಲಿದೆ. ಈಗಾಗಲೇ ವಾಯುವ್ಯದಲ್ಲಿ ಕ್ಯಾಶ್ಲೆಸ್ ಇದ್ದು ಇಲ್ಲಿಯೂ ಬರಲಿದೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…