ರಾಜ್ಯ

ತಪ್ಪಲಿದೆ ಚಿಲ್ಲರೆ ತಲೆಬಿಸಿ; ಶೀಘ್ರದಲ್ಲೇ ಕ್ಯಾಶ್‌ಲೆಸ್‌ ಆಗಲಿದೆ ಕೆಎಸ್‌ಆರ್‌ಟಿಸಿ!

ಯುಪಿಐ ಬಂದಾಗಿನಿಂದ ಹಲವಾರು ಮಂದಿ ತಾವು ಪ್ರತಿನಿತ್ಯ ಪ್ರಯಾಣಿಸುವ ಬಸ್‌ಗಳಲ್ಲಿಯೂ ಟಿಕೆಟ್‌ ಪಡೆದುಕೊಳ್ಳಲು ಯುಪಿಐ ಪಾವತಿಯನ್ನು ಸ್ವೀಕರಿಸಿದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಸುವರೂ ಸಹ ಚಿಲ್ಲರೆ ಕಿರಿಕಿರಿಯಾದಾಗಲೆಲ್ಲಾ ಆನ್‌ಲೈನ್‌ ಪೇಮೆಂಟ್‌ ಇದ್ದಿದ್ದರೆ ಎಷ್ಟು ಚೆಂದ ಎಂದುಕೊಂಡಿದ್ದುಂಟು.

ಇದೀಗ ಇಂತಹ ಹಲವರ ಅಭಿಪ್ರಾಯ ಹಾಗೂ ಕನಸು ನನಸಾಗುವ ಸಮಯ ಹತ್ತಿರ ಬಂದಿದೆ. ರಾಜ್ಯ ಸಚಿವ ರಾಮಲಿಂಗರೆಡ್ಡಿ ಈ ಕುರಿತು ಮಾಧ್ಯಮದವರ ಜತೆ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲಿಯೇ ಕ್ಯಾಶ್‌ಲೆಸ್‌ ಪ್ರಯಾಣ ಮಾಡಬಹುದು, ಅದರ ಕುರಿತ ಕೆಲಸಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಮೂರು ತಿಂಗಳಲ್ಲಿ ಕ್ಯಾಶ್‌ಲೆಸ್‌ ಶುರುವಾಗಲಿದೆ. ತಾಂತ್ರಿಕ ಕೆಲಸಗಳು ಜರುಗುತ್ತಿದ್ದು, ಜನರಿಗೆ ಇರುವ ಚಿಲ್ಲರೆ ಸಮಸ್ಯೆಗಳು ಕಡಿಮೆಯಾಗಲಿದೆ. ಈಗಾಗಲೇ ವಾಯುವ್ಯದಲ್ಲಿ ಕ್ಯಾಶ್‌ಲೆಸ್‌ ಇದ್ದು ಇಲ್ಲಿಯೂ ಬರಲಿದೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

3 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago