ರಾಜ್ಯ

ತಪ್ಪಲಿದೆ ಚಿಲ್ಲರೆ ತಲೆಬಿಸಿ; ಶೀಘ್ರದಲ್ಲೇ ಕ್ಯಾಶ್‌ಲೆಸ್‌ ಆಗಲಿದೆ ಕೆಎಸ್‌ಆರ್‌ಟಿಸಿ!

ಯುಪಿಐ ಬಂದಾಗಿನಿಂದ ಹಲವಾರು ಮಂದಿ ತಾವು ಪ್ರತಿನಿತ್ಯ ಪ್ರಯಾಣಿಸುವ ಬಸ್‌ಗಳಲ್ಲಿಯೂ ಟಿಕೆಟ್‌ ಪಡೆದುಕೊಳ್ಳಲು ಯುಪಿಐ ಪಾವತಿಯನ್ನು ಸ್ವೀಕರಿಸಿದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಸುವರೂ ಸಹ ಚಿಲ್ಲರೆ ಕಿರಿಕಿರಿಯಾದಾಗಲೆಲ್ಲಾ ಆನ್‌ಲೈನ್‌ ಪೇಮೆಂಟ್‌ ಇದ್ದಿದ್ದರೆ ಎಷ್ಟು ಚೆಂದ ಎಂದುಕೊಂಡಿದ್ದುಂಟು.

ಇದೀಗ ಇಂತಹ ಹಲವರ ಅಭಿಪ್ರಾಯ ಹಾಗೂ ಕನಸು ನನಸಾಗುವ ಸಮಯ ಹತ್ತಿರ ಬಂದಿದೆ. ರಾಜ್ಯ ಸಚಿವ ರಾಮಲಿಂಗರೆಡ್ಡಿ ಈ ಕುರಿತು ಮಾಧ್ಯಮದವರ ಜತೆ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲಿಯೇ ಕ್ಯಾಶ್‌ಲೆಸ್‌ ಪ್ರಯಾಣ ಮಾಡಬಹುದು, ಅದರ ಕುರಿತ ಕೆಲಸಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಮೂರು ತಿಂಗಳಲ್ಲಿ ಕ್ಯಾಶ್‌ಲೆಸ್‌ ಶುರುವಾಗಲಿದೆ. ತಾಂತ್ರಿಕ ಕೆಲಸಗಳು ಜರುಗುತ್ತಿದ್ದು, ಜನರಿಗೆ ಇರುವ ಚಿಲ್ಲರೆ ಸಮಸ್ಯೆಗಳು ಕಡಿಮೆಯಾಗಲಿದೆ. ಈಗಾಗಲೇ ವಾಯುವ್ಯದಲ್ಲಿ ಕ್ಯಾಶ್‌ಲೆಸ್‌ ಇದ್ದು ಇಲ್ಲಿಯೂ ಬರಲಿದೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

andolana

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

11 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

12 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

14 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

14 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

18 hours ago