ರಾಜ್ಯ

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ – ಪರಿಶೀಲನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ,  ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಸಮೀಕ್ಷೆ ವರದಿಯನ್ನು ಸರಿಯಾಗಿ ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ ಎಂದರು.

ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ : ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ
ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ.

ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

andolana

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

4 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

5 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

5 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

6 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

6 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

6 hours ago