ರಾಜ್ಯ

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ – ಪರಿಶೀಲನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ,  ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಸಮೀಕ್ಷೆ ವರದಿಯನ್ನು ಸರಿಯಾಗಿ ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ ಎಂದರು.

ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ : ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ
ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ.

ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

andolana

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

7 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

20 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

22 hours ago