ರಾಜ್ಯ

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ – ಪರಿಶೀಲನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ,  ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಸಮೀಕ್ಷೆ ವರದಿಯನ್ನು ಸರಿಯಾಗಿ ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ ಎಂದರು.

ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ : ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ
ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ.

ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago