ರಾಜ್ಯ

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಸ್ಥಳೀಯರಿಗೆ ಆತಂಕ ಬೇಡ ; ಈಶ್ವರ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ.

ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ.

ಹೀಗೆ ತಿಂಗಳುಗಟ್ಟಲೆ  ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago