ರಾಜ್ಯ

5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದು ಮತ್ತು ಡಿಕೆಶಿಗೆ ಮಾತ್ರ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಅವರಿಗೆ ಮಾತ್ರ. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು.

ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

ಸಿಎಂ ಹೇಳಿಕೆ ರಾಜಕೀಯ ಬಣಕ್ಕೆ ಕಾರಣವಾಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿ, ಏನೂ ಆಗಲ್ಲ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಅನ್ನೊದು ನನ್ನ ಅನಿಸಿಕೆ. ನಾನಂತೂ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಕ್ಕೆ ಹೋಗಲ್ಲ ಎಂದು ಹೇಳಿದರು.

lokesh

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

30 mins ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

37 mins ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

2 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

2 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

4 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

5 hours ago