ರಾಜ್ಯ

5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದು ಮತ್ತು ಡಿಕೆಶಿಗೆ ಮಾತ್ರ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಅವರಿಗೆ ಮಾತ್ರ. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು.

ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

ಸಿಎಂ ಹೇಳಿಕೆ ರಾಜಕೀಯ ಬಣಕ್ಕೆ ಕಾರಣವಾಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿ, ಏನೂ ಆಗಲ್ಲ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಅನ್ನೊದು ನನ್ನ ಅನಿಸಿಕೆ. ನಾನಂತೂ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಕ್ಕೆ ಹೋಗಲ್ಲ ಎಂದು ಹೇಳಿದರು.

lokesh

Recent Posts

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

33 mins ago

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…

1 hour ago

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…

2 hours ago

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

2 hours ago

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…

3 hours ago