ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಅವರಿಗೆ ಮಾತ್ರ. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು.
ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.
ಸಿಎಂ ಹೇಳಿಕೆ ರಾಜಕೀಯ ಬಣಕ್ಕೆ ಕಾರಣವಾಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿ, ಏನೂ ಆಗಲ್ಲ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಅನ್ನೊದು ನನ್ನ ಅನಿಸಿಕೆ. ನಾನಂತೂ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಕ್ಕೆ ಹೋಗಲ್ಲ ಎಂದು ಹೇಳಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…