ರಾಜ್ಯ

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ಸ್ಥಾಪನೆ : ಸಿ.ಎಂ.ಸಿದ್ದರಾಮಯ್ಯ ಭರವಸೆ

ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು

ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago