ರಾಜ್ಯ

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ಸ್ಥಾಪನೆ : ಸಿ.ಎಂ.ಸಿದ್ದರಾಮಯ್ಯ ಭರವಸೆ

ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು

ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

16 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

16 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

16 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

16 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

16 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

16 hours ago