ಬೆಂಗಳೂರು: ಜೆಡಿಎಸ್ ಮುಗಿಸಬೇಕು ಅಂತಲೇ ಆಪರೇಷನ್ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ವರ್ಕೌಟ್ ಆಗಲ್ಲ. ನಮ್ಮ ಪಕ್ಷದ ಯಾವ ಶಾಸಕರು ಕೂಡ ಕಾಂಗ್ರೆಸ್ಗೆ ಹೋಗುವ ಪರಿಸ್ಥಿತಿ ಬಂದಿಲ್ಲ. ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ. ದೇವರೇ ಅವರಿಗೆಲ್ಲಾ ಶಿಕ್ಷೆ ಕೊಡುತ್ತಾನೆ ಎಂದು ನಾನು ಸುಮ್ಮನಿದ್ದೇನೆ ಎಂದರು.
ಇನ್ನು ರಾಜ್ಯದಲ್ಲಿ ಡಿಸೆಂಬರ್.5ರಿಂದ ಬಸ್ ಪ್ರಯಾಣ ದರ ಏರಿಕೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಬೆಲೆ ಏರಿಕೆಗೆ ಸಿದ್ಧರಾಗಿ ಎಂದು ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಈ ಬಗ್ಗೆ ಜನರು ಕೂಡ ಒಂದೆರಡು ದಿನ ವಿರೋಧಿಸಿ ಅಮೇಲೆ ಎಲ್ಲವನ್ನೂ ಮರೆತುಬಿಡುತ್ತಾರೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…