ಬೆಂಗಳೂರು: ಜೆಡಿಎಸ್ ಮುಗಿಸಬೇಕು ಅಂತಲೇ ಆಪರೇಷನ್ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ವರ್ಕೌಟ್ ಆಗಲ್ಲ. ನಮ್ಮ ಪಕ್ಷದ ಯಾವ ಶಾಸಕರು ಕೂಡ ಕಾಂಗ್ರೆಸ್ಗೆ ಹೋಗುವ ಪರಿಸ್ಥಿತಿ ಬಂದಿಲ್ಲ. ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ. ದೇವರೇ ಅವರಿಗೆಲ್ಲಾ ಶಿಕ್ಷೆ ಕೊಡುತ್ತಾನೆ ಎಂದು ನಾನು ಸುಮ್ಮನಿದ್ದೇನೆ ಎಂದರು.
ಇನ್ನು ರಾಜ್ಯದಲ್ಲಿ ಡಿಸೆಂಬರ್.5ರಿಂದ ಬಸ್ ಪ್ರಯಾಣ ದರ ಏರಿಕೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಬೆಲೆ ಏರಿಕೆಗೆ ಸಿದ್ಧರಾಗಿ ಎಂದು ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಈ ಬಗ್ಗೆ ಜನರು ಕೂಡ ಒಂದೆರಡು ದಿನ ವಿರೋಧಿಸಿ ಅಮೇಲೆ ಎಲ್ಲವನ್ನೂ ಮರೆತುಬಿಡುತ್ತಾರೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…