ರಾಜ್ಯ

ಕರ್ನಾಟಕದಲ್ಲಿ ಆಪರೇಷನ್‌ ಕಮಲ ಕುರಿತು ಶಿಂಧೆ ಭ್ರಮೆಯಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್‌ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಶಿಂಧೆ ಅವರ ಆಪರೇಷನ್‌ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ ಆದಂತೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್‌ ಕಮಲ ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿಯೇ ಮಾಡಲು ಹೋಗಿ ಬಿಜೆಪಿ ವಿಫಲಗೊಂಡಿದೆ. ಇನ್ನು ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಬಣ ಇರುವುದೇ ಅನುಮಾನವಾಗಿದೆ. ಎಲ್ಲರೂ ಕೂಡಾ ಅವರವರ ಪಕ್ಷಕ್ಕೆ ವಾಪಾಸಾಗಲಿದ್ದಾರೆ. ಮಹಾ ಸರ್ಕಾರದ ಒರಿಜಿನಲ್‌ ಶಿವಸೇನಾ ನಾಯಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಮಹಾ ಸಿಎಂ ಶಿಂಧೆ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

9 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

25 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

42 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

55 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago