ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಶಿಂಧೆ ಅವರ ಆಪರೇಷನ್ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ ಆದಂತೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್ ಕಮಲ ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿಯೇ ಮಾಡಲು ಹೋಗಿ ಬಿಜೆಪಿ ವಿಫಲಗೊಂಡಿದೆ. ಇನ್ನು ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಬಣ ಇರುವುದೇ ಅನುಮಾನವಾಗಿದೆ. ಎಲ್ಲರೂ ಕೂಡಾ ಅವರವರ ಪಕ್ಷಕ್ಕೆ ವಾಪಾಸಾಗಲಿದ್ದಾರೆ. ಮಹಾ ಸರ್ಕಾರದ ಒರಿಜಿನಲ್ ಶಿವಸೇನಾ ನಾಯಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಮಹಾ ಸಿಎಂ ಶಿಂಧೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…