opposite partys drama has been revealed in front of peoples
ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದವು. ಈಗ ಸುಪ್ರೀಂಕೋರ್ಟ್ನ ತೀರ್ಪು ವಿರೋಧಪಕ್ಷಗಳ ನಾಟಕವನ್ನು ಜನರ ಮುಂದೆ ಬಹಿರಂಗ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹೈಕೋರ್ಟ್ ಇ.ಡಿ ಪ್ರಕರಣವನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿದೇಶನಾಲಯ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು ಎಂದು ನಮಗೆ ಗೊತ್ತಿರಲಿಲ್ಲ. ಇಂದು ತ್ರಿಸದಸ್ಯ ಪೀಠದ ಮುಂದೆ ವಿಚಾರಣೆ ಇದೆ ಎಂದು ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ನನಗೆ ತಿಳಿಸಿದರು. ತೀರ್ಪು ನಮ್ಮ ಪರವಾಗಿದೆ. ಇದನ್ನು ಸ್ವಾಗತಿಸುತ್ತೇವೆ ಎಂದರು.
ಹೈಕೋರ್ಟ್ನ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದು ಸುಪ್ರೀಂಕೋರ್ಟ್ ಕಟುವಾಗಿ ಹೇಳಿದೆ. ಇದು ನ್ಯಾಯಕ್ಕೆ ಸಂದ ಜಯ. ಸಂವಿಧಾನದ ಪ್ರಕಾರ ನ್ಯಾಯಮೂರ್ತಿಗಳು ನಮಗೆ ನ್ಯಾಯದಾನ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ಹಾಗೂ ಇತರೆ ನಾಟಕೀಯ ನಡವಳಿಕೆಗಳು ಜನರ ಮುಂದೆ ಬಹಿರಂಗಗೊಂಡಿವೆ ಎಂದರು.
ನ್ಯಾಯಾಲಯಗಳು ದೇವರ ಸಮಾನ ಎಂದು ಮತ್ತೊಮ್ಮೆ ಸಾಬೀತಾಗಿವೆ. ಸುಪ್ರೀಂಕೋರ್ಟ್ ತಕ್ಕ ಪಾಠ ಕಲಿಸಿದ ಬಳಿಕವಾದರೂ ಬಿಜೆಪಿ, ಜೆಡಿಎಸ್ ಪಕ್ಷಗಳು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಮುಂದಿನ ದಿನಗಳಲ್ಲಿ ರಾಜಕೀಯಕ್ಕಾಗಿ ಜನರನ್ನು ದಾರಿ ತಪ್ಪಿಸುವುದನ್ನು ಬಿಡಬೇಕು ಎಂದು ಹೇಳಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…