ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಇಂದು (ನ.17) ಬಿಜೆಪಿಯ 40% ಕಮಿಷನ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಮೇಲೆ 40% ಕಮೀಷನ್ ಕುರಿತು ಆರೋಪ ಮಾಡಿದ್ದರು. ಆದರೆ ಈ ಆರೋಪವೂ ಸುಳ್ಳು ಎಂದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ತಾನೂ ಏನೂ ತಪ್ಪು ಮಾಡಿಲ್ಲವೆಂದು ವಾದ ಮಾಡುತ್ತಿದ್ದರು. ಆದರೆ ಆ ಪ್ರಕರಣದ ಬಗ್ಗೆ ತನ್ನದು ಏನು ತಪ್ಪಿಲ್ಲವೆಂದು ಸಾಬೀತುಪಡಿಸುವ ಮೊದಲೇ ಮುಡಾ ಕಚೇರಿಗೆ ನಿವೇಶನಗಳನ್ನು ವಾಪಾಸ್ಸು ನೀಡಿದ್ದಾರೆ ಎಂದು ಆರೋಪಿಸಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…