ರಾಜ್ಯ

ಕಾಲ್ತುಳಿತ | ಮೃತ ಭೂಮಿಕ್‌ ಮನೆಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಭೇಟಿ, ನ್ಯಾಯ ಕೊಡಿಸುವ ಭರವಸೆ

ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿ ಭೂಮಿಕ್‌ ಅವರ ತಂದೆ ಡಿ.ಟಿ.ಲಕ್ಷ್ಮಣ ಅವರೊಂದಿಗೆ ಆರ್.ಅಶೋಕ ಮಾತನಾಡಿ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಇದಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ, ಎಂಜಿನಿಯರಿಂಗ್‌ ವಿದ್ಯಾರ್ಥಿ ಭೂಮಿಕ್‌ ಮೃತಪಟ್ಟಿದ್ದರಿಂದ ಕುಟುಂಬದವರಿಗೆ ಬಹಳ ದುಃಖವಾಗಿದೆ. ಈ ಕುಟುಂಬದವರ ಜಮೀನಿನಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಇವರ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ, ಈಗ ಒಬ್ಬನೇ ಮಗ ಮೃತಪಟ್ಟಿದ್ದು, ಆ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಎಂದರು.

ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು ಎಂದು ಭೂಮಿಕ್‌ ಅವರ ತಂದೆ ಹೇಳುತ್ತಿದ್ದಾರೆ. ಭೂಮಿಕ್‌ ಅವರ ತಂದೆ ಸಮಾಧಿಯ ಬಳಿಯೇ ದುಃಖದಿಂದ ಎರಡು ಮೂರು ದಿನ ಕಳೆದಿದ್ದಾರೆ. ಮುಂದೆ ಈ ರೀತಿಯ ಅನಾಹುತ ನಡೆಯಬಾರದು. ಕಾರ್ಯಕ್ರಮ ಮಾಡುವುದು ಬೇಡವೆಂದು ಪೊಲೀಸರು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಸೂಕ್ತವಾದ ತನಿಖೆಗೆ ಒಳಪಡಬೇಕು. ನ್ಯಾಯ ಕೊಡಿಸಲು ನಾವೆಲ್ಲರೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಮೃತ ಭೂಮಿಕ್‌ ತಂದೆ ಲಕ್ಷ್ಮಣ ಮಾತನಾಡಿ, ಇಷ್ಟು ಜನಸಂದಣಿ ಇರುವಾಗ ಇಂತಹ ಕಾರ್ಯಕ್ರಮ ಮಾಡಬಾರದು ಎಂದು ಸರ್ಕಾರಕ್ಕೆ ಯಾಕೆ ಗೊತ್ತಾಗಲಿಲ್ಲ? ನಮ್ಮಂತಹವರ ಮಕ್ಕಳ ಪ್ರಾಣ ಹೋಗಿದೆ. ಸರ್ಕಾರವೇನೋ ಪರಿಹಾರ ನೀಡಿದೆ. ಆದರೆ ಆ ಹಣ ನಮ್ಮನ್ನು ನೋಡಿಕೊಳ್ಳುತ್ತದೆಯೇ? ಎಂದು ಪ್ರಶ್ನೆ ಮಾಡಿದರು.

ಆರ್‌.ಅಶೋಕ ಸೇರಿದಂತೆ ಎಲ್ಲ ಮುಖಂಡರು ನಮಗೆ ಸಹಾಯ ಮಾಡಿದ್ದಾರೆ. ಎಲ್ಲ ತಂದೆ ತಾಯಿಗಳಿಗೆ ಇವರು ಸ್ಪಂದಿಸಿದ್ದಾರೆ. ಘಟನೆ ನಡೆದ ಕೂಡಲೇ ಅಗತ್ಯವಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ರಾಜಕೀಯವಲ್ಲ. ಮಾನವೀಯತೆ ದೃಷ್ಟಿಯಿಂದ ಇವರು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago