ರಾಜ್ಯ

ಕಾಲ್ತುಳಿತ | ಮೃತ ಭೂಮಿಕ್‌ ಮನೆಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಭೇಟಿ, ನ್ಯಾಯ ಕೊಡಿಸುವ ಭರವಸೆ

ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿ ಭೂಮಿಕ್‌ ಅವರ ತಂದೆ ಡಿ.ಟಿ.ಲಕ್ಷ್ಮಣ ಅವರೊಂದಿಗೆ ಆರ್.ಅಶೋಕ ಮಾತನಾಡಿ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಇದಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ, ಎಂಜಿನಿಯರಿಂಗ್‌ ವಿದ್ಯಾರ್ಥಿ ಭೂಮಿಕ್‌ ಮೃತಪಟ್ಟಿದ್ದರಿಂದ ಕುಟುಂಬದವರಿಗೆ ಬಹಳ ದುಃಖವಾಗಿದೆ. ಈ ಕುಟುಂಬದವರ ಜಮೀನಿನಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಇವರ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ, ಈಗ ಒಬ್ಬನೇ ಮಗ ಮೃತಪಟ್ಟಿದ್ದು, ಆ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಎಂದರು.

ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು ಎಂದು ಭೂಮಿಕ್‌ ಅವರ ತಂದೆ ಹೇಳುತ್ತಿದ್ದಾರೆ. ಭೂಮಿಕ್‌ ಅವರ ತಂದೆ ಸಮಾಧಿಯ ಬಳಿಯೇ ದುಃಖದಿಂದ ಎರಡು ಮೂರು ದಿನ ಕಳೆದಿದ್ದಾರೆ. ಮುಂದೆ ಈ ರೀತಿಯ ಅನಾಹುತ ನಡೆಯಬಾರದು. ಕಾರ್ಯಕ್ರಮ ಮಾಡುವುದು ಬೇಡವೆಂದು ಪೊಲೀಸರು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಸೂಕ್ತವಾದ ತನಿಖೆಗೆ ಒಳಪಡಬೇಕು. ನ್ಯಾಯ ಕೊಡಿಸಲು ನಾವೆಲ್ಲರೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಮೃತ ಭೂಮಿಕ್‌ ತಂದೆ ಲಕ್ಷ್ಮಣ ಮಾತನಾಡಿ, ಇಷ್ಟು ಜನಸಂದಣಿ ಇರುವಾಗ ಇಂತಹ ಕಾರ್ಯಕ್ರಮ ಮಾಡಬಾರದು ಎಂದು ಸರ್ಕಾರಕ್ಕೆ ಯಾಕೆ ಗೊತ್ತಾಗಲಿಲ್ಲ? ನಮ್ಮಂತಹವರ ಮಕ್ಕಳ ಪ್ರಾಣ ಹೋಗಿದೆ. ಸರ್ಕಾರವೇನೋ ಪರಿಹಾರ ನೀಡಿದೆ. ಆದರೆ ಆ ಹಣ ನಮ್ಮನ್ನು ನೋಡಿಕೊಳ್ಳುತ್ತದೆಯೇ? ಎಂದು ಪ್ರಶ್ನೆ ಮಾಡಿದರು.

ಆರ್‌.ಅಶೋಕ ಸೇರಿದಂತೆ ಎಲ್ಲ ಮುಖಂಡರು ನಮಗೆ ಸಹಾಯ ಮಾಡಿದ್ದಾರೆ. ಎಲ್ಲ ತಂದೆ ತಾಯಿಗಳಿಗೆ ಇವರು ಸ್ಪಂದಿಸಿದ್ದಾರೆ. ಘಟನೆ ನಡೆದ ಕೂಡಲೇ ಅಗತ್ಯವಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ರಾಜಕೀಯವಲ್ಲ. ಮಾನವೀಯತೆ ದೃಷ್ಟಿಯಿಂದ ಇವರು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

8 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

9 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

11 hours ago