ರಾಜ್ಯ

ಕಾಲ್ತುಳಿತ | ಮೃತ ಭೂಮಿಕ್‌ ಮನೆಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಭೇಟಿ, ನ್ಯಾಯ ಕೊಡಿಸುವ ಭರವಸೆ

ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿ ಭೂಮಿಕ್‌ ಅವರ ತಂದೆ ಡಿ.ಟಿ.ಲಕ್ಷ್ಮಣ ಅವರೊಂದಿಗೆ ಆರ್.ಅಶೋಕ ಮಾತನಾಡಿ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಇದಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ, ಎಂಜಿನಿಯರಿಂಗ್‌ ವಿದ್ಯಾರ್ಥಿ ಭೂಮಿಕ್‌ ಮೃತಪಟ್ಟಿದ್ದರಿಂದ ಕುಟುಂಬದವರಿಗೆ ಬಹಳ ದುಃಖವಾಗಿದೆ. ಈ ಕುಟುಂಬದವರ ಜಮೀನಿನಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಇವರ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ, ಈಗ ಒಬ್ಬನೇ ಮಗ ಮೃತಪಟ್ಟಿದ್ದು, ಆ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಎಂದರು.

ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು ಎಂದು ಭೂಮಿಕ್‌ ಅವರ ತಂದೆ ಹೇಳುತ್ತಿದ್ದಾರೆ. ಭೂಮಿಕ್‌ ಅವರ ತಂದೆ ಸಮಾಧಿಯ ಬಳಿಯೇ ದುಃಖದಿಂದ ಎರಡು ಮೂರು ದಿನ ಕಳೆದಿದ್ದಾರೆ. ಮುಂದೆ ಈ ರೀತಿಯ ಅನಾಹುತ ನಡೆಯಬಾರದು. ಕಾರ್ಯಕ್ರಮ ಮಾಡುವುದು ಬೇಡವೆಂದು ಪೊಲೀಸರು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಸೂಕ್ತವಾದ ತನಿಖೆಗೆ ಒಳಪಡಬೇಕು. ನ್ಯಾಯ ಕೊಡಿಸಲು ನಾವೆಲ್ಲರೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಮೃತ ಭೂಮಿಕ್‌ ತಂದೆ ಲಕ್ಷ್ಮಣ ಮಾತನಾಡಿ, ಇಷ್ಟು ಜನಸಂದಣಿ ಇರುವಾಗ ಇಂತಹ ಕಾರ್ಯಕ್ರಮ ಮಾಡಬಾರದು ಎಂದು ಸರ್ಕಾರಕ್ಕೆ ಯಾಕೆ ಗೊತ್ತಾಗಲಿಲ್ಲ? ನಮ್ಮಂತಹವರ ಮಕ್ಕಳ ಪ್ರಾಣ ಹೋಗಿದೆ. ಸರ್ಕಾರವೇನೋ ಪರಿಹಾರ ನೀಡಿದೆ. ಆದರೆ ಆ ಹಣ ನಮ್ಮನ್ನು ನೋಡಿಕೊಳ್ಳುತ್ತದೆಯೇ? ಎಂದು ಪ್ರಶ್ನೆ ಮಾಡಿದರು.

ಆರ್‌.ಅಶೋಕ ಸೇರಿದಂತೆ ಎಲ್ಲ ಮುಖಂಡರು ನಮಗೆ ಸಹಾಯ ಮಾಡಿದ್ದಾರೆ. ಎಲ್ಲ ತಂದೆ ತಾಯಿಗಳಿಗೆ ಇವರು ಸ್ಪಂದಿಸಿದ್ದಾರೆ. ಘಟನೆ ನಡೆದ ಕೂಡಲೇ ಅಗತ್ಯವಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ರಾಜಕೀಯವಲ್ಲ. ಮಾನವೀಯತೆ ದೃಷ್ಟಿಯಿಂದ ಇವರು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago