ರಾಜ್ಯ

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನು ಓದಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಕರ್ನಾಟಕದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

7 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

7 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

8 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

8 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

9 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

17 hours ago