ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಜಭವನದಲ್ಲಿ ಇಂದು(ಮಾರ್ಚ್.12) ಈ ಕುರಿತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ಸಲುವಾಗಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಜನತೆಗೆ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಅಲ್ಲದೇ ಈ ರಾಜ್ಯ ಸರ್ಕಾರಕ್ಕೆ ತಿಳಿ ಹೇಳುವ ಹಾಗು ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…