ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್ ಪೇಪರ್ ಹರಿದು ಎಸೆದಿದ್ದಾರೆ.
ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸುನಿಲ್ ಕುಮಾರ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಸದನದಲ್ಲಿ ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್ ಆಗಿದೆ ಎಂಬ ಹೇಳಿಕೆ ನೀಡಿದ್ದರು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆಯ ಮೇರೆಗೆ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಅವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ಇದಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಭಾಷಣಕ್ಕೆ ಉತ್ತರ ನೀಡಲು ಪ್ರಾರಂಭಿಸಿದರು. ಆದರೆ ಈ ವೇಳೆ ವಿರೋಧ ಪಕ್ಷದ ನಾಯಕರು, ಮುಸ್ಲಿಮ್ರ ಶೇ.4% ಹಲಾಲ್ ಬಜೆಟ್ಯೆಂದು ಘೋಷಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಸಿಡಿ ಪ್ರದರ್ಶನ ಮಾಡಿದ್ದಾರೆ.
ಇನ್ನು ಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು. ಅಲ್ಲದೇ ಸರ್ಕಾರದ ಅನೇಕ ಮಸೂದೆಗಳಿಗೆ ಅಂಗೀಕಾರವನ್ನು ಪಡೆದುಕೊಳ್ಳಲಾಗಿದೆ. ಆದರೆ ಈ ವೇಳೆ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್ ಯು.ಟಿ.ಖಾದರ್ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದ್ದಾರೆ. ಹೀಗಾಗಿ ಸದನ ಕಲಾಪನ್ನು 10 ನಿಮಿಷ ಮುಂದಕ್ಕೆ ಹಾಕಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…