ರಾಜ್ಯ

ಸದನದ ಬಾವಿಗಿಳಿದು ವಿಪಕ್ಷಗಳಿಂದ ಪ್ರತಿಭಟನೆ: ಸಭಾಧ್ಯಕ್ಷರ ಮೇಲೆ ಪೇಪರ್‌ ಎಸೆತ

ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್‌ ಪೇಪರ್‌ ಹರಿದು ಎಸೆದಿದ್ದಾರೆ.

ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.‌21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ಸುನಿಲ್‌ ಕುಮಾರ್‌ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಸದನದಲ್ಲಿ ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂಬ ಹೇಳಿಕೆ ನೀಡಿದ್ದರು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಅವರ ಹೇಳಿಕೆಯ ಮೇರೆಗೆ ಸರ್ಕಾರ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಅವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

ಇದಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಭಾಷಣಕ್ಕೆ ಉತ್ತರ ನೀಡಲು ಪ್ರಾರಂಭಿಸಿದರು. ಆದರೆ ಈ ವೇಳೆ ವಿರೋಧ ಪಕ್ಷದ ನಾಯಕರು, ಮುಸ್ಲಿಮ್‌ರ ಶೇ.4% ಹಲಾಲ್‌ ಬಜೆಟ್‌ಯೆಂದು ಘೋಷಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಸಿಡಿ ಪ್ರದರ್ಶನ ಮಾಡಿದ್ದಾರೆ.

ಇನ್ನು ಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು. ಅಲ್ಲದೇ ಸರ್ಕಾರದ ಅನೇಕ ಮಸೂದೆಗಳಿಗೆ ಅಂಗೀಕಾರವನ್ನು ಪಡೆದುಕೊಳ್ಳಲಾಗಿದೆ. ಆದರೆ ಈ ವೇಳೆ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್‌ ಯು.ಟಿ.ಖಾದರ್‌ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದ್ದಾರೆ. ಹೀಗಾಗಿ ಸದನ ಕಲಾಪನ್ನು 10 ನಿಮಿಷ ಮುಂದಕ್ಕೆ ಹಾಕಿದರು.

ಅರ್ಚನ ಎಸ್‌ ಎಸ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago