ರಾಜ್ಯ

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣ‌ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು.

ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಪಾಟೀಲ್‌ ತಿಳಿಸಿದರು.

ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ವಿವರಿಸಿದರು.

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಮೃತಪಟ್ಟವರಿಗೆ ಮುಖ್ಯಮಂತ್ರಿಗಳು ಈಗಾಗಲೇ ರೂ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

39 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago