ರಾಜ್ಯ

ಹೈಕೋರ್ಟ್‌ನಿಂದ ಸಿ.ಟಿ.ರವಿ ಬಿಡುಗಡೆಗೆ ಆದೇಶ: ಪ್ರಜಾಪ್ರಭುತ್ವದ ಗೆದ್ದಿದೆ ಎಂದ ವಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ನಿನ್ನೆಯಿಂದ(ಡಿ.19) ಇಂದಿನವರೆಗೂ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮಧ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ಹೀಗಾಗಿ ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣಿಸುವವರೆಗೂ ಬಿಜೆಪಿ ಸರ್ಕಾರ ತನ್ನ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ
ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

5 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

5 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

5 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

5 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

6 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

6 hours ago