ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ನಿನ್ನೆಯಿಂದ(ಡಿ.19) ಇಂದಿನವರೆಗೂ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮಧ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ಹೀಗಾಗಿ ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವವನ್ನು ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣಿಸುವವರೆಗೂ ಬಿಜೆಪಿ ಸರ್ಕಾರ ತನ್ನ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ
ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ ಎಂದು ತಿಳಿಸಿದ್ದಾರೆ.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…