ರಾಜ್ಯ

ಹೈಕೋರ್ಟ್‌ನಿಂದ ಸಿ.ಟಿ.ರವಿ ಬಿಡುಗಡೆಗೆ ಆದೇಶ: ಪ್ರಜಾಪ್ರಭುತ್ವದ ಗೆದ್ದಿದೆ ಎಂದ ವಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ನಿನ್ನೆಯಿಂದ(ಡಿ.19) ಇಂದಿನವರೆಗೂ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮಧ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ಹೀಗಾಗಿ ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣಿಸುವವರೆಗೂ ಬಿಜೆಪಿ ಸರ್ಕಾರ ತನ್ನ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ
ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

11 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

12 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

12 hours ago