ಬೆಂಗಳೂರು : ಮಳೆ ಸುರಿದು ಜಲಾಶಯಗಳಲ್ಲಿ ನೀರು ಹರಿದು ಬರುಂತಾಗಲಿ. ದೇವರನ್ನು ಪ್ರಾರ್ಥಿಸುವ ಹೊರತಾಗಿ ತಮ್ಮಲ್ಲಿ ಬೇರೆ ದಾರಿ ಉಳಿದಿಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಿನ್ನೆ ತಮಿಳುನಾಡಿಗೆ ನ.1 ರಿಂದ ನ.15 ರವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲ.ಕೆಆರ್ಎಸ್ ಅಣೆಕಟ್ಟೆಗೆ ಒಳಹರಿವು ಬಹುತೇಕ ಶೂನ್ಯವಾಗಿದೆ. ಆದರೆ, ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ 815 ಕ್ಯೂಸೆಕ್ ನೀರು ತಮಿಳುನಾಡಿಗೆ ನೈಸರ್ಗಿಕವಾಗಿ ಹರಿದು ಹೋಗುತ್ತಿದೆ. ಸದ್ಯ ನಮ್ಮಲ್ಲಿ ಕೇವಲ 51 ಟಿಎಂಸಿ ಅಡಿ ನೀರು ಇದ್ದು, ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ ಎಂದರು.
ಇನ್ನು ಮುಂದುವರೆದು ಮಾತನಾಡಿದ ಅವರು, ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ. ಇದನ್ನು ಸಂಬಂಧಪಟ್ಟವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…