ರಾಜ್ಯ

ಶೋಷಿತ ಸಮುದಾಯಗಳ ಸಂಘಟನೆ ನಿರಂತರ ಪ್ರಕ್ರಿಯೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ (ಮಂಗಳವಾರ, ಅಗಸ್ಟ್ 20) ಆಯೋಜಿಸಿದ್ದ ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಸಂಘಟಿತರಾದಾಗ ಪರಿಹಾರ ಕಂಡುಕೊಳ್ಳಲು ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.

ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್.ಗಣೇಶ್, ಡಾ.ಎನ್.ಟಿ.ಶ್ರೀನಿವಾಸ, ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ ,ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

40 mins ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

52 mins ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

1 hour ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

3 hours ago