ರಾಜ್ಯ

ಶೋಷಿತ ಸಮುದಾಯಗಳ ಸಂಘಟನೆ ನಿರಂತರ ಪ್ರಕ್ರಿಯೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ (ಮಂಗಳವಾರ, ಅಗಸ್ಟ್ 20) ಆಯೋಜಿಸಿದ್ದ ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಸಂಘಟಿತರಾದಾಗ ಪರಿಹಾರ ಕಂಡುಕೊಳ್ಳಲು ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.

ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್.ಗಣೇಶ್, ಡಾ.ಎನ್.ಟಿ.ಶ್ರೀನಿವಾಸ, ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ ,ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

1 hour ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago