ರಾಜ್ಯ

ಶೋಷಿತ ಸಮುದಾಯಗಳ ಸಂಘಟನೆ ನಿರಂತರ ಪ್ರಕ್ರಿಯೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ (ಮಂಗಳವಾರ, ಅಗಸ್ಟ್ 20) ಆಯೋಜಿಸಿದ್ದ ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಸಂಘಟಿತರಾದಾಗ ಪರಿಹಾರ ಕಂಡುಕೊಳ್ಳಲು ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.

ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್.ಗಣೇಶ್, ಡಾ.ಎನ್.ಟಿ.ಶ್ರೀನಿವಾಸ, ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ ,ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.

ಆಂದೋಲನ ಡೆಸ್ಕ್

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

60 mins ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

2 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

4 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

7 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

8 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

9 hours ago