ಬೆಂಗಳೂರು : ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ (ಮಂಗಳವಾರ, ಅಗಸ್ಟ್ 20) ಆಯೋಜಿಸಿದ್ದ ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಸಂಘಟಿತರಾದಾಗ ಪರಿಹಾರ ಕಂಡುಕೊಳ್ಳಲು ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.
ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್.ಗಣೇಶ್, ಡಾ.ಎನ್.ಟಿ.ಶ್ರೀನಿವಾಸ, ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ ,ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…